ಮಾದಿಗೆ ಸಮುದಾಯಕ್ಕೆ ಸಾಮಾಜಿಕ ನ್ಯಾಯ: ಡಾ. ಡಿ. ತಿಮ್ಮಯ್ಯ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಕ್ಕೆ ಒತ್ತಾಯ
ಸಾಮಾಜಿಕ ನ್ಯಾಯದ ನೆಲೆಯಲ್ಲಿ ಡಾ. ಡಿ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಎಡಗೈ ಸಮುದಾಯದ ಒತ್ತಾಯ ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗೆ (ಎಡಗೈ) ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಎಡಗೈ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಮೈಸೂರು–ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಅತ್ಯಧಿಕ ಮತಗಳ ಅಂತರದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಡಾ. ಡಿ. ತಿಮ್ಮಯ್ಯ ಅವರು ಕಳೆದ ಮೂರು ದಶಕಗಳಿಂದ ಮೈಸೂರು ವಿಭಾಗದಲ್ಲಿ ಮಾದಿಗೆ (ಎಡಗೈ) ಸಮುದಾಯವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿದರು. ಅಲ್ಲದೆ, ವಿಧಾನಸಭೆ, ಲೋಕಸಭೆ ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಿರಂತರವಾಗಿ ಶ್ರಮಿಸಿದ್ದಾರೆ ಎಂದು ವಿವರಿಸಿದರು. ಪರಿಶಿಷ್ಟ ಜಾತಿಗಳ ಪ್ರವರ್ಗ ‘ಬಿ’ಗೆ ಈಗಾಗಲೇ ಉಪ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಎರಡು ಸಚಿವ ಸ್ಥಾನಗಳನ್ನು ನೀಡಲಾಗಿದೆ. ಅದೇ ಮಾದರಿಯಲ್ಲಿ ಪ್ರವರ್ಗ ‘ಎ’ಗೂ ಉಪ ಮುಖ್ಯಮಂತ್ರಿ ಸ್ಥಾನ ಸ...